ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ. ಚೆನ್ನಮ್ಮ ಅವರ ಸಮಾಧಿಗೆ ಹೂವಿನ ಹಾರ ಹಾಕಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು

*ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿರುವ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಸಮಾಧಿ ಸ್ಥಳಕ್ಕೆ ನೆನ್ನೆ ಸಂಜೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಚೆನ್ನಮ್ಮ ಅವರ ಸಮಾಧಿಗೆ ಹೂವಿನ ಹಾರ ಹಾಕಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ವೇಳೆ ಸಮಾಧಿ ಸ್ಥಳದಲ್ಲೇ ಕುಳಿತಿದ್ದ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ರೇವಣ್ಣ ಅವರಿಗೆ ಸಾಂತ್ವನ ಹೇಳಿ ಆರೋಗ್ಯ ವಿಚಾರಿಸಿ ಕೆಲಕಾಲ ಎಚ್.ಡಿ.ದೇವೇಗೌಡರ ಜೊತೆ ಕುಳಿತು ತೆರಳಿದರು.

